ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
Cross references
ಮರುದಿನ ದಲ್ಲಿ ಅವರು ಬೆಳಿಗ್ಗೆ ಎದ್ದು ದಹನಬಲಿಗಳನ್ನು ಅರ್ಪಿಸಿ ಸಮಾಧಾನದ ಬಲಿಗಳನ್ನು ತಂದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡು, ಎದ್ದು ಕುಣಿದಾಡಿದರು.
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು.
ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.
ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.
ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ
ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು.
ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
ಹೊಶೇಯನಿಂದಾದ ಕರ್ತನ ವಾಕ್ಯದ ಪ್ರಾರಂ ಭವು: ಕರ್ತನು ಹೊಶೇಯನಿಗೆ ಹೇಳಿದ್ದೇನಂದರೆ --ಹೋಗಿ ನಿನಗೆ ವ್ಯಭಿಚಾರಿಣಿಗಳ ಹೆಂಡತಿಯನ್ನೂ ವ್ಯಭಿಚಾರಿಣಿಗಳ ಮಕ್ಕಳನ್ನೂ ತೆಗೆದುಕೊ; ದೇಶವು ಕರ್ತನನ್ನು ಬಿಟ್ಟು ದೊಡ್ಡ ವ್ಯಭಿಚಾರತನವನ್ನು ಮಾಡಿಕೊಂಡಿದೆ.
ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
ಅವರು ಮಿತಿವಿಾರಿ ಕುಡಿಯುತ್ತಾರೆ; ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ; ಅವರನ್ನು ಆಳುವವರು ನಾಚಿಕೆ ಯನ್ನು ಪ್ರೀತಿ ಮಾಡಿಯೇ ಮಾಡುತ್ತಾರೆ.ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸದೆ ಮತ್ತು ಅವರು ತಮ್ಮ ಬಲಿಗಳಿಂದ ನಾಚಿಕೆ ಪಡುವರು.
ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.