ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
Cross references
ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
ಆದರೆ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿ ಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ
ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
ಇದಲ್ಲದೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿಬಿಟ್ಟ ಅಮೋರಿಯರ ಎಲ್ಲಾ ಕೃತ್ಯಗಳ ಪ್ರಕಾರ ಅವನು ವಿಗ್ರಹಗಳನ್ನು ಹಿಂಬಾ ಲಿಸಿ ಬಹಳ ಅಸಹ್ಯವಾಗಿ ನಡೆದನು.
ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ--
ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು
ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ.
ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
ಗಂಡನಿಗೂ ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
ಅದನ್ನು ನಾನು ಮತ್ತೆ ಒರೆಗೆ ಸೇರಿಸುವೆನೋ? ನೀನು ನಿರ್ಮಿಸಲ್ಪಟ್ಟ ಸ್ಥಳದಲ್ಲಿಯೇ ನೀನು ಹುಟ್ಟಿದ ಸ್ಥಳದಲ್ಲಿಯೇ ನಿನಗೆ ನ್ಯಾಯತೀರಿಸುವೆನು.
ಆದರೆ ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳು ವದಕ್ಕಾಗಿ ಬರುವದನ್ನು ಅವನು ಕಂಡು ಅವರಿಗೆ-- ಓ ಸರ್ಪ ಸಂತತಿಯವರೇ, ಬರುವದಕ್ಕಿರುವ ಕೋಪ ದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮ್ಮನ್ನು ಎಚ್ಚರಿಸಿದವರು ಯಾರು?
ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
ಆಗ ತನ್ನಿಂದ ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ--ಓ ಸರ್ಪಗಳ ಸಂತತಿಯವರೇ, ಬರುವದಕ್ಕಿರುವ ಕೋಪದಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಎಚ್ಚರಿಸಿದವರಾರು?
ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಗೆ ಸಂಬಂಧಪಟ್ಟವನಲ್ಲ.