ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
Cross references
ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
ಇದಲ್ಲದೆ ಅದರ ಎಲ್ಲಾ ಕೊಳ್ಳೆಯನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ ಆ ಪಟ್ಟಣವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ಸಂಪೂರ್ಣವಾಗಿ ನಿನ್ನ ದೇವರಾದ ಕರ್ತನಿಗೆ ಬೆಂಕಿಯಿಂದ ಸುಟ್ಟುಬಿಡಬೇಕು; ಅದು ಎಂದೆಂದಿಗೂ ದಿಬ್ಬವಾಗಬೇಕು; ತರುವಾಯ ಅದನ್ನು ಕಟ್ಟಬಾರದು.
ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು;
ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ.
ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
ಆತನು ವಿಗ್ರಹಗಳನ್ನು ಸಂಪೂರ್ಣ ವಾಗಿ ಇಲ್ಲದಂತೆ ಮಾಡಿಬಿಡುವನು.
ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.
ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.
ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ನಿನ್ನ ಮಧ್ಯದೊಳಗಿಂದ ಕಡಿದು ಬಿಡುವೆನು; ನೀನು ಇನ್ನು ಸ್ವಂತ ಕೈಕೆಲಸಗಳನ್ನು ಆರಾಧಿಸುವದಿಲ್ಲ.
ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.