ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
Cross references
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು.
ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ
ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
ಆದರೆ ಯಾರ ಹೃದಯವು ಅವರ ಹೇಸಿಗೆಗಳ ಮತ್ತು ಅವರ ಅಸಹ್ಯಗಳ ಹೃದಯದ ಬಳಿಗೆ ಹೋಗುತ್ತದೋ, ನಾನು ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸುತ್ತೇನೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
ನೀನು ನಿನ್ನ ದುಷ್ಕರ್ಮಗಳನ್ನೂ ಅಸಹ್ಯಗಳನ್ನೂ ಹೊತ್ತುಕೊಂಡಿರುವಿ ಎಂದು ಕರ್ತನು ಹೇಳುತ್ತಾನೆ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.
ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.