ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
Cross references
ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.
ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--
ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.
ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.