Home Bibles ಯೆಹೆಜ್ಕೇಲ 16:6 · ಕನ್ನಡ ಬೈಬಲ್
ಯೆಹೆಜ್ಕೇಲ 16:6 · ಕನ್ನಡ ಬೈಬಲ್

ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.

Cross references

ನಿರ್ಗಮಕಾಂಡ 2:24

ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್‌ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.

ನಿರ್ಗಮಕಾಂಡ 3:7

ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

ನಿರ್ಗಮಕಾಂಡ 19:4

ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;

ದ್ವಿತೀಯೋಪದೇಶಕಾಂಡ 9:4

ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

ಕೀರ್ತನೆಗಳು 105:10

ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ--

ಕೀರ್ತನೆಗಳು 105:26

ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.

ಯೆಶಾಯ 14:19

ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.

ಯೆಶಾಯ 51:23

ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.

ಯೆಹೆಜ್ಕೇಲ 20:5

ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,

ಮೀಕ 7:10

ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.

ಮತ್ತಾಯ 5:13

ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.

ಯೋಹಾನ 5:25

ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.

ಅಪೋಸ್ತಲರ ಕೃತ್ಯಗಳು 7:34

ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.

ರೋಮಾಪುರದವರಿಗೆ 9:15

ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.

ಎಫೆಸದವರಿಗೆ 2:4

ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ

ತೀತ 3:3

ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.

ಹೆಬ್ರಿಯರಿಗೆ 10:29

ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.

ಪ್ರಕಟನೆ 14:20

ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.

Interlinear

Choose Theme