ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
Cross references
ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು.
ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
ನಾನೇ ಕರ್ತನೆಂದೂ ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ ನಾನು ವ್ಯರ್ಥವಾಗಿ ಹೇಳುವದಿಲ್ಲವೆಂದೂ ತಿಳಿದುಕೊಳ್ಳುವರು.
ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು.
ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.