ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು.
Cross references
ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ.
ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.
ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--
ಕರ್ತನು ಇಸ್ರಾಯೇಲನ್ನೂ ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ--
ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.
ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?