ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
Cross references
ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಆದದರಿಂದ ನೀವು ನನ್ನ ನಿಯಮಗಳನ್ನು ನಿರ್ಣಯಗಳನ್ನು ಕೈಕೊಳ್ಳಬೇಕು. ನಿಮ್ಮ ದೇಶದವರಲ್ಲಿ ಯಾವನೇ ಆಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನಾದರೂ ಮಾಡ ಬಾರದು.
ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು.
ನಿಶ್ಚಯವಾಗಿ ಅವರು ಅಪರಾಧ ವನ್ನು ಮಾಡದೆ ಆತನ ಮಾರ್ಗಗಳಲ್ಲಿ ನಡೆದುಕೊಳ್ಳು ತ್ತಾರೆ.
ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನು ಹೀನೈಸುವನು; ಆತನನ್ನು ಸನ್ಮಾನಿಸುವವನು ಬಡವರನ್ನು ಕನಿಕರಿಸುತ್ತಾನೆ.
ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿ ಕೊಳ್ಳುವ ಹಾಗೆ ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಇದ್ದಾನೆ; ಅವನು ತನ್ನ ಮದ್ಯ ಪ್ರಾಯದಲ್ಲಿ ಅದನ್ನು ಬಿಡುವನು; ತನ್ನ ಅಂತ್ಯದಲ್ಲಿ ಅವನು ಮೂರ್ಖನಾಗಿರುವನು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
ತಾನು ಆಲೋಚಿಸಿ ತಾನು ಮಾಡುವ ಎಲ್ಲಾ ದುಷ್ಕೃತ್ಯಗಳನ್ನು ಬಿಟ್ಟು ತಿರುಗಿ ಕೊಳ್ಳುವದರಿಂದ ಸಾಯದೆ ನಿಶ್ಚಯವಾಗಿ ಬದುಕು ವನು.
ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
ನಾನು ನೀತಿವಂತನಿಗೆ--ನೀನು ನಿಶ್ಚಯವಾಗಿ ಬದುಕುವಿ ಎಂದು ಹೇಳುವಾಗ--ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನ ಎಲ್ಲಾ ನೀತಿಯು ಜ್ಞಾಪಕಮಾಡಿ ಕೊಳ್ಳಲ್ಪಡುವದಿಲ್ಲ; ಆದರೆ ಅವನು ಮಾಡಿದ ಅವನ ಅಕ್ರಮಗಳಿಗಾಗಿಯೇ ಅವನು ಸಾಯುತ್ತಾನೆ.
ದುಷ್ಟನು ತನ್ನ ಒತ್ತೆಯನ್ನು ಹಿಂದಕ್ಕೆ ಕೊಟ್ಟರೆ ಮತ್ತು ದೋಚಿಕೊಂಡದ್ದನ್ನು ತಿರುಗಿ ಕೊಟ್ಟು ಅನ್ಯಾಯವನ್ನು ಮಾಡದೆ ಜೀವದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತ ವಾಗಿ ಬದುಕುವನು.
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ.
ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
ಆಗ ಜಕ್ಕಾಯನು ನಿಂತುಕೊಂಡು ಕರ್ತನಿಗೆ--ಕರ್ತನೇ, ಇಗೋ, ನನ್ನ ಸೊತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ನಾನು ಯಾರಿಂದಲಾದರೂ ಸುಳ್ಳಾಗಿ ದೂರು ಹೇಳಿ ಏನಾದರೂ ತಕ್ಕೊಂಡಿದ್ದರೆ ಅವನಿಗೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಅಂದನು.