ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.
Cross references
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
ಆದರೆ ಮನಸ್ಸೆಯು ಕರ್ತನಿಗೆ ಕೋಪ ವನ್ನು ಎಬ್ಬಿಸಲು ಮಾಡಿದ ಎಲ್ಲಾ ಕ್ರಿಯೆಗಳಿಗೋಸ್ಕರ ಯೆಹೂದಕ್ಕೆ ವಿರೋಧವಾಗಿ ತನ್ನನ್ನು ಉದ್ರೇಕಿಸಿದ ಕೋಪವನ್ನೂ ತನ್ನ ಮಹಾಕೋಪದ ಉರಿಯನ್ನೂ ಕರ್ತನು ಬಿಟ್ಟುಬಿಡಲಿಲ್ಲ.
ನಿಶ್ಚಯವಾಗಿ ಕರ್ತನ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಅದೇನಂದರೆ, ಮನಸ್ಸೆಯು ತನ್ನ ಎಲ್ಲಾ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ ಅವರನ್ನು ಆತನು ತನ್ನ ಸಮ್ಮುಖದಿಂದ ತೆಗೆದು ಹಾಕುವದಕ್ಕೋಸ್ಕರವೇ.
ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.
ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದರು; ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.
ಆದದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾ ದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರ ಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದವುಗಳ ಪ್ರಕಾರ ವ್ಯಭಿಚಾರಮಾಡುತ್ತೀರೋ?
ಓ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರೊಂದಿಗೆ ಮಾತನಾಡಿ ಹೀಗೆ ಹೇಳು --ನಮ್ಮ ಅಪರಾಧಗಳೂ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲಿ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು; ಎಂದು ಹೇಳುವಿರಲ್ಲಾ?
ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.