ತಂದೆಗಳು ಹುಳಿ ದ್ರಾಕ್ಷೆಗಳನ್ನು ತಿಂದರು ಮಕ್ಕಳ ಹಲ್ಲು ಉಳಿತು ಹೋಯಿತು ಎಂಬ ಗಾದೆಯನ್ನು ಇಸ್ರಾಯೇಲ್ ದೇಶದ ವಿಷಯವಾಗಿ ನೀವು ಉಪಯೋಗಿಸುವ ಇದರ ಅರ್ಥವೇನು?
Cross references
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ನೀವು ನನ್ನ ಪ್ರಜೆಯನ್ನು ಹೊಡೆದು ಚೂರು ಗಳನ್ನಾಗಿ ಮಾಡಿ ಬಡವರ ಮುಖಗಳನ್ನು ಹಿಂಡು ವದರ ಅರ್ಥವೇನು ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು ಅವುಗಳಿಗೆ ವಿರೋಧವಾಗಿ ಪ್ರವಾದಿಸಿ
ಮನುಷ್ಯಪುತ್ರನೇ, ದೇವರಾದ ಕರ್ತನು ಇಸ್ರಾ ಯೇಲ್ ದೇಶಕ್ಕೆ ಹೀಗೆ ಹೇಳುತ್ತಾನೆ--ಅಂತ್ಯವು ಬಂದಿದೆ; ಈ ದೇಶದ ನಾಲ್ಕು ಮೂಲೆಗಳಲ್ಲೂ ಅಂತ್ಯವು ಬಂದಿದೆ.
ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
ಆದರೆ ಓ ಮನುಷ್ಯನೇ, ದೇವರಿಗೆ ಎದುರು ಮಾತನಾಡುವದಕ್ಕೆ ನೀನು ಯಾರು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ--ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?