Home Bibles ಯೆಹೆಜ್ಕೇಲ 18:21 · ಕನ್ನಡ ಬೈಬಲ್
ಯೆಹೆಜ್ಕೇಲ 18:21 · ಕನ್ನಡ ಬೈಬಲ್

ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.

Cross references

ಆದಿಕಾಂಡ 26:5

ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.

2 ದಿನವೃತ್ತಾಂತ 33:12

ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು.

ಕೀರ್ತನೆಗಳು 119:1

ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.

ಕೀರ್ತನೆಗಳು 119:80

ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.

ಕೀರ್ತನೆಗಳು 119:112

ನಿನ್ನ ನಿಯಮಗಳನ್ನು ಕಡೇ ವರೆಗೂ ಈಡೇರಿಸುವದಕ್ಕೆ ನಾನು ಮನಸ್ಸು ಮಾಡಿದ್ದೇನೆ.

ಸಾಮೇತಿಗಳು 28:13

ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.

ಯೆಶಾಯ 1:16

ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;

ಯೆಶಾಯ 55:6

ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.

ಯೆರೆಮಿಯ 18:8

ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.

ಯೆರೆಮಿಯ 26:3

ಅವುಗಳನ್ನು ಎದೋಮಿನ ಅರಸನಿಗೂ ಮೋವಾಬಿನ ಅರಸನಿಗೂ ಅಮ್ಮೋನ್ಯರ ಅರಸನಿಗೂ ತೂರಿನ ಅರಸನಿಗೂ ಚೀದೋನಿನ ಅರಸನಿಗೂ ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಬರುವ ಸುದ್ದಿಗಾರರ ಕೈಯಿಂದ ಕಳುಹಿಸು.

ಯೆಹೆಜ್ಕೇಲ 3:21

ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.

ಯೆಹೆಜ್ಕೇಲ 18:5

ಒಬ್ಬ ಮನುಷ್ಯನು ನೀತಿವಂತ ನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡಿಸಿ,

ಯೆಹೆಜ್ಕೇಲ 18:9

ಸತ್ಯವನ್ನು ಮಾಡುವದ ಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಕೊಂಡು ಸತ್ಯಪರನಾಗಿ ನಡೆದರೆ ಅವನು ನೀತಿ ವಂತನು ಮತ್ತು ನಿಶ್ಚಯವಾಗಿ ಬದುಕುವವನು ಎಂದು ದೇವರಾದ ಕರ್ತನು ಹೇಳಿದ್ದಾನೆ.

ಯೆಹೆಜ್ಕೇಲ 18:17

ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.

ಯೆಹೆಜ್ಕೇಲ 18:19

ಆದಾಗ್ಯೂ ಇನ್ನೂ ನೀವು--ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲವೇ ಎಂದು ಹೇಳುವಿರಿ; ನಿಶ್ಚಯವಾಗಿ ಮಗನು ನ್ಯಾಯವನ್ನೂ ನೀತಿಯನ್ನೂ ಮಾಡಿ ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.

ಯೆಹೆಜ್ಕೇಲ 18:27

ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನ್ಯಾಯವನ್ನೂ ನೀತಿಯನ್ನೂ ಅನುಸರಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಂಡು ಬದುಕುವನು.

ಯೆಹೆಜ್ಕೇಲ 18:30

ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.

ಯೆಹೆಜ್ಕೇಲ 33:11

ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?

ಯೆಹೆಜ್ಕೇಲ 33:19

ಆದರೆ ದುಷ್ಟನು ದುಷ್ಟತ್ವವನ್ನು ಬಿಟ್ಟು ತಿರುಗಿಕೊಂಡು ನ್ಯಾಯ ವನ್ನೂ ನೀತಿಯನ್ನೂ ನಡೆಸಿದರೆ ಅವನು ಅದರಲ್ಲಿಯೇ ಬದುಕುವನು.

ಯೆಹೆಜ್ಕೇಲ 36:27

ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.

ಲೂಕ 1:6

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.

ಲೂಕ 24:47

ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.

ಅಪೋಸ್ತಲರ ಕೃತ್ಯಗಳು 3:19

ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

ಅಪೋಸ್ತಲರ ಕೃತ್ಯಗಳು 26:18

ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು

ರೋಮಾಪುರದವರಿಗೆ 8:13

ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.

ಗಲಾತ್ಯದವರಿಗೆ 5:22

ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ

1 ತಿಮೋಥೆಯ 1:13

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

ತೀತ 2:11

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.

ಯಾಕೋಬ 2:14

ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?

ಯಾಕೋಬ 2:26

ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.

ಯಾಕೋಬ 4:8

ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.

Interlinear

Choose Theme