ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
Cross references
ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ.
ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
ಆದರೆ ಇಂತಹ ವನು ಪಡೆದ ಮಗನು ದರೋಡೆಕೋರನಾಗಿ ರಕ್ತವನ್ನು ಚೆಲ್ಲುವವನಾದರೆ ಇಂತಹ ಕೆಲಸಗಳನ್ನು ಮಾಡುತ್ತಾನೆ.
ಆತನ ತಂದೆಯ ವಿಷಯವಾದರೋ ಅವನು ಬಹಳ ಬಲಾತ್ಕಾರ ಮಾಡಿ ದ್ದರಿಂದಲೂ ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ ತನ್ನ ಜನರ ಮಧ್ಯದಲ್ಲಿ ಕೆಟ್ಟದನ್ನು ಮಾಡಿದ್ದರಿಂದಲೂ ಇಗೋ, ಅವನು ಅಕ್ರಮದಲಿ ಸಾಯುವನು.
ಅವನು ಮಾಡಿದ ಅಪರಾಧಗಳೆಲ್ಲಾ ಅವನಿಗೆ ವಿರುದ್ದವಾಗಿ ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.
ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.
ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು.
ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟುಹೋಗಿ ಮತ್ತೆ ಅವರು ಆತನ ಸಂಗಡ ಎಂದಿಗೂ ಸಂಚರಿಸಲೇ ಇಲ್ಲ.
ಯೇಸು ತಿರಿಗಿ ಅವರಿಗೆ--ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪ ಗಳಲ್ಲಿ ಸಾಯುವಿರಿ; ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.
ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ನಾನು ನಿಮಗೆ ಹೇಳಿದೆನು. ಯಾಕಂದರೆ ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ ಎಂದು ಹೇಳಿದನು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ಹಾಗಾದರೆ ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ? ವ್ಯರ್ಥವಾಯಿ ತೇನೋ?
ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು;