ಇಗೋ, ಎಲ್ಲಾ ಪ್ರಾಣಗಳು ನನ್ನವೇ; ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ; ಪಾಪ ಮಾಡುವವನೇ ತಾನಾ ಗಿಯೇ ಸಾಯುವನು.
Cross references
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
ತಂದೆಗಳು ಮಕ್ಕಳ ನಿಮಿತ್ತವೂ ಮಕ್ಕಳು ತಂದೆಗಳ ನಿಮಿತ್ತವೂ ಕೊಲ್ಲಲ್ಪಡಬಾರದು; ಒಬ್ಬೊಬ್ಬನು ತನ್ನ ಪಾಪದ ನಿಮಿತ್ತ ಕೊಲ್ಲಲ್ಪಡಬೇಕು.
ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
ಪಾಪ ಮಾಡುವ ಪ್ರಾಣವು ತಾನಾಗಿ ಸಾಯುವದು; ಮಗನು ತಂದೆಯ ಅಕ್ರಮವನ್ನು ಹೊರುವದಿಲ್ಲ. ತಂದೆಯು ಮಗನ ಅಕ್ರಮವನ್ನು ಹೊರುವದಿಲ್ಲ. ನೀತಿವಂತನ ನೀತಿಯು ಅವನ ಮೇಲೆಯೇ ಇರುವದು. ದುಷ್ಟನ ದುಷ್ಟತ್ವವು ಅವನ ಮೇಲೆಯೇ ಇರುವದು.
ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು.
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?