ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯ ದಿಂದ ತನ್ನ ಕೈಯನ್ನು ಹಿಂತೆಗೆದು ಒಬ್ಬರಿಗೊಬ್ಬರು ಸತ್ಯದ ನ್ಯಾಯವನ್ನು ನಡಿಸಿ,
Cross references
ನಿನ್ನ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಅವರಿಂದ ಬಡ್ಡಿ ತಕ್ಕೊಳ್ಳಬಾರದು. ಇಲ್ಲವೆ ಅವರ ಮೇಲೆ ಬಡ್ಡಿ ಹೊರಿಸ ಬೇಡ.
ನ್ಯಾಯತೀರ್ಪಿನಲ್ಲಿ ನೀನು ಅನ್ಯಾಯಮಾಡದಿರು; ಬಡವನ ಮುಖದಾಕ್ಷಿಣ್ಯ ನೋಡಬೇಡ, ಬಲಿಷ್ಠನ ವ್ಯಕ್ತಿತ್ವವನ್ನು ಗೌರವಿಸದಿರು. ಆದರೆ ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯತೀರ್ಪು ಮಾಡು.
ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ.
ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣನಾಗಿ ಬಿದ್ದುಕೊಂಡಿದ್ದರೆ ಅವನು ಪರಕೀಯ ನಾಗಿದ್ದರೂ ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿ ಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡ ಬೇಕು.
ನಿಮ್ಮ ಗೋತ್ರಗಳಿಗೆ ಅಧಿಕಾರಿಗಳಾಗಿಯೂ ಮಾಡಿದೆನು. ಆ ಕಾಲದಲ್ಲಿ ನಿಮ್ಮ ನ್ಯಾಯಾಧಿಪತಿಗಳಿಗೆ ಕೊಟ್ಟ ಅಪ್ಪಣೆ ಏನಂದರೆ--ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ಕೇಳಿ ಒಬ್ಬೊಬ್ಬ ನಿಗೂ ಅವನ ಸಹೋದರನಿಗೂ ಅವನ ಪರವಾ ಸಿಗೂ ನೀತಿಯಾಗಿ ನ್ಯಾಯತೀರಿಸಿರಿ.
ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
ನೀನು ನ್ಯಾಯವನ್ನು ಓರೆಮಾಡಬಾರದು,ನೀನು ಮುಖದಾಕ್ಷಿಣ್ಯ ಮಾಡಬಾರದು; ಇಲ್ಲವೆ ಲಂಚ ತೆಗೆದುಕೊಳ್ಳಬಾರದು; ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ ನೀತಿವಂತರ ಮಾತು ಗಳನ್ನು ಡೊಂಕುಮಾಡುತ್ತದೆ.
ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು.
ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
ನೀನು ನಿನ್ನ ದೇವರಾದ ಕರ್ತನಿಗೆ ಪ್ರಮಾಣ ಮಾಡಿದ ಮೇಲೆ ಅದನ್ನು ಸಲ್ಲಿಸುವದಕ್ಕೆ ತಡಮಾಡ ಬೇಡ; ನಿನ್ನ ದೇವರಾದ ಕರ್ತನು ಅದನ್ನು ನಿಶ್ಚಯ ವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವನು; ಅದು ನಿನ್ನಲ್ಲಿ ಪಾಪವಾಗಿರುವದು.
ಆತನ ಮುಂದೆ ಸಂಪೂರ್ಣನಾಗಿದ್ದು ಅಕ್ರಮದಿಂದ ನನ್ನನ್ನು ತಪ್ಪಿಸಿ ಕಾಪಾಡಿಕೊಂಡೆನು.
ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
ನಾನು ನನ್ನ ಸಹೋದರರೂ ನನ್ನ ಸೇವಕರೂ ಅವರಿಂದ ಹಣ ವನ್ನೂ ಧಾನ್ಯವನ್ನೂ ಒತ್ತಾಯದಿಂದ ತಕ್ಕೊಳ್ಳಬಹು ದಾಗಿತ್ತು.
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.
ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ.
ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನೂ ಲಾಭವನ್ನು ತೆಗೆದುಕೊಳ್ಳದೆ, ನನ್ನ ನ್ಯಾಯ ಗಳನ್ನು ಮಾಡಿ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವದಿಲ್ಲ ನಿಶ್ಚಯವಾಗಿ ಬದುಕುವನು.
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.