ಅವರು ನಿರ್ಲಜ್ಜರಾದ ಒರಟು ಹೃದಯವುಳ್ಳ ಮಕ್ಕಳಾಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ ನೀನು ಅವರಿಗೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳಬೇಕು.
Cross references
ಹೀಗಿರುವದರಿಂದ ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಬಗ್ಗದ ಕುತ್ತಿಗೆಯುಳ್ಳವ ರಾಗಿರಬೇಡಿರಿ.
ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.
ನಿಮ್ಮ ಪಿತೃ ಗಳ ಹಾಗೆ ನಿಮ್ಮ ಕುತ್ತಿಗೆಯನ್ನು ಕಠಿಣಪಡಿಸಬೇಡಿರಿ. ಕರ್ತನಿಗೆ ಕೈಕೊಟ್ಟು ಆತನು ಯುಗಯುಗಕ್ಕೂ ಪರಿಶುದ್ಧ ಮಾಡಿದ ಆತನ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಕರ್ತನನ್ನು ಸೇವಿಸಿರಿ. ಆಗ ತನ್ನ ಉಗ್ರಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವನು.
ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ಅರಣ್ಯದಲ್ಲಿ ಆದ ಶೋಧನೆಯ ದಿವಸದಲ್ಲಿ ಕೋಪವನ್ನೆಬ್ಬಿಸಿದಂತೆ ನಿಮ್ಮ ಹೃದ ಯವನ್ನು ಕಠಿಣಮಾಡಿಕೊಳ್ಳಬೇಡಿರಿ.
ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ.
ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
ಕರ್ತನು ನನಗೆ ಹೇಳಿದ್ದೇನಂದರೆ--ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.
ನನಗೆ ಆತನು--ಮನುಷ್ಯಪುತ್ರನೇ, ಹೋಗು; ಇಸ್ರಾಯೇಲ್ಯರ ಮನೆಯವರ ಬಳಿಗೆ ಹೋಗಿ ಅವರ ಸಂಗಡ ನನ್ನ ಮಾತುಗಳನ್ನು ಮಾತನಾಡು.
ಆದರೆ ಇಸ್ರಾ ಯೇಲಿನ ಮನೆತನದವರು ನಿನಗೆ ಕಿವಿಗೊಡುವದಿಲ್ಲ; ಅವರು ನನಗೆ ಕಿವಿಗೊಟ್ಟಿಲ್ಲ. ಯಾಕಂದರೆ ಎಲ್ಲಾ ಇಸ್ರಾಯೇಲಿನ ಮನೆತನದವರು ಕಠಿಣ ಹೃದಯ ದವರೂ ನಿರ್ಲಜ್ಜರೂ (ನಾಚಿಕೆಗೆಟ್ಟವರೂ) ಆಗಿದ್ದಾರೆ.
ಹೋಗು, ಸೆರೆಯಾಗಿರುವ ನಿನ್ನ ಜನರ ಮಕ್ಕಳ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು, ಅವರು ಕೇಳಿದರೂ ಕೇಳದಿದ್ದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು.
ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಆದಕಾರಣ ಎಲ್ಲಾ ಮನುಷ್ಯರ ರಕ್ತದ ವಿಷಯದಲ್ಲಿ ನಾನು ನಿರ್ದೋಷಿಯಾಗಿದ್ದೇನೆಂಬದಕ್ಕೆ ಈ ದಿವಸ ನೀವೇ ನನಗೆ ಸಾಕ್ಷಿಗಳು.