ನಾನೇ ಕರ್ತನೂ ನಿಮ್ಮ ದೇವರೂ ಆಗಿದ್ದೇನೆ ನನ್ನ ನಿಯಮಗಳಲ್ಲಿಯೇ ನಡೆ ಯಿರಿ ನ್ಯಾಯಗಳನ್ನು ಕೈಕೊಂಡು ಅವುಗಳನ್ನೇ ಮಾಡಿರಿ;
Cross references
ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ನೀವು ನನ್ನ ನಿರ್ಣಯಗಳನ್ನು ಕೈಕೊಂಡು ಅವುಗಳಲ್ಲಿ ನಡೆಯುವ ಹಾಗೆ ನನ್ನ ಕಟ್ಟಳೆಗಳಂತೆ ನಡೆಯಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
ನೀವು ಬದುಕಿ ಅಭಿವೃದ್ಧಿಯಾಗಿ ಕರ್ತನು ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಹೋಗಿ ಅದನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಕೊಳ್ಳಬೇಕು.
ಆ ಕಾಲದಲ್ಲಿ ಕರ್ತನು ನನಗೆ--ಮೊದಲಿ ನವುಗಳ ಹಾಗೆ ಎರಡು ಕಲ್ಲಿನ ಹಲಗೆ ಗಳನ್ನು ನೀನು ಕೆತ್ತಿಕೊಂಡು ಬೆಟ್ಟವನ್ನೇರಿ ನನ್ನ ಬಳಿಗೆ ಬಾ; ಮರದ ಮಂಜೂಷವನ್ನು ನಿನಗೆ ಮಾಡಿಕೊಳ್ಳ ಬೇಕು.
ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿನ್ನ ಪಿತೃಗಳ ದೇವರಾದ ಕರ್ತನು ಕೊಡುವ ದೇಶದಲ್ಲಿ ನೀವು ಭೂಮಿಯ ಮೇಲೆ ಬದುಕುವ ದಿವಸಗಳಲ್ಲೆಲ್ಲಾ ಲಕ್ಷಿಸಿ ಮಾಡತಕ್ಕ ನಿಯಮ ನ್ಯಾಯಗಳು ಇವೇ.
ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು.
ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
ಆಗ ಅವರು ನನ್ನ ನಿಯಮಗಳಲ್ಲಿ ನಡೆದುಕೊಂಡು ನನ್ನ ನಿಯಮಗ ಳನ್ನು ಕೈಕೊಂಡು ನಡೆಯುವರು. ಅವರು ನನ್ನ ಜನರಾಗು ವರು, ನಾನು ಅವರ ದೇವರಾಗುವೆನು.
ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.