ಆದಾಗ್ಯೂ ಮಕ್ಕಳು ನನಗೆ ವಿರೋಧವಾಗಿ ತಿರುಗಿ ಬಿದ್ದರು; ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ನನ್ನ ನ್ಯಾಯಗಳನ್ನು ಕೈಕೊಂಡುಮಾಡಲಿಲ್ಲ; ನನ್ನ ಸಬ್ಬತ್ತುಗಳನ್ನು ಅಪವಿತ್ರ ಪಡಿಸಿದಾಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ ನನ್ನ ಕೋಪ ವನ್ನು ಅರಣ್ಯದಲ್ಲಿ ಅವರ ಮೇಲೆ ತೀರಿಸಿಬಿಡುವೆ ನೆಂದೂ ಹೇಳಿದೆನು.
Cross references
ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ--ನಾವು ಅರಣ್ಯದಲ್ಲಿ ಸಾಯುವಹಾಗೆ ನಮ್ಮನ್ನು ಐಗುಪ್ತದೇಶದಿಂದ ಯಾಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ; ನಾವು ಈ ನಿಸ್ಸಾರ ವಾದ ರೊಟ್ಟಿಯನ್ನು ತಿಂದು ಅಸಹ್ಯಪಡುತ್ತೇವೆ ಅಂದರು.
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು.
ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ಕರ್ತನು ತನ್ನ ರೋಷವನ್ನು ತೀರಿಸಿ ದ್ದಾನೆ; ಆತನು ತನ್ನ ಉಗ್ರವಾದ ಕೋಪವನ್ನು ಸುರಿದಿದ್ದಾನೆ; ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು
ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು; ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ತಮ್ಮ ಕಣ್ಣುಗಳಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ; ಅವರು ಐಗುಪ್ತದ ವಿಗ್ರಹಗಳನ್ನು ಬಿಡಲಿಲ್ಲ; ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಐಗುಪ್ತದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.
ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.
ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರದ ಬೆಂಕಿಯನ್ನು ನಿನ್ನ ಮೇಲೆ ಊದಿ ನಾಶಪಡಿಸುವದರಲ್ಲಿ ಗಟ್ಟಿಗರಾದಂಥ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸು ವೆನು.ನೀನು ಅಗ್ನಿಗೆ ಆಹುತಿಯಾಗುವ ಸೌದೆಯಾ ಗುವಿ, ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವದು; ನೀನು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲವೆಂದು ಕರ್ತನಾದ ನಾನೇ ಹೇಳಿದ್ದೇನೆ.
ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ಆತನು ಸುಮಾರು ನಾಲ್ವತ್ತು ವರುಷಗಳ ವರೆಗೂ ಅಡವಿಯಲ್ಲಿ ಅವರ ನಡಾವಳಿಯನ್ನು ಸಹಿಸಿ ಕೊಂಡು
ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.