ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
Cross references
ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ದೇವರು ಮೋಶೆಯ ಸಂಗಡ ಮಾತನಾಡಿ--ನಾನೇ ಕರ್ತನು;
ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ
ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ನಿಮ್ಮ ದೇವರಾಗಿರುವ ಕರ್ತನು ನಾನೇ.
ಇಲ್ಲವೆ ನಿಮ್ಮ ದೇವರಾದ ಕರ್ತನು ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆ ನಿಮಗೆ ಮಾಡಿದ್ದೆಲ್ಲಾದರ ಹಾಗೆ ಬೇರೆ ದೇವರು ಹೋಗಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಮಧ್ಯ ದಿಂದ ಶೋಧನೆಗಳು ಗುರುತುಗಳು ಅದ್ಭುತಗಳು ಇವುಗಳ ಮೂಲಕವಾಗಿಯೂ ಯುದ್ಧದಿಂದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಮಹಾಭೀತಿಯಿಂದಲೂ ತಕ್ಕೊಳ್ಳುವದಕ್ಕೆ ಪ್ರಯತ್ನ ಮಾಡಿದನೋ?
ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನಂದರೆ --ನಿಮ್ಮ ದೇವರಾದ ಕರ್ತನು ಮಾಡಿದ ಶಿಕ್ಷೆಯನ್ನೂ ಆತನ ಮಹತ್ವವನ್ನೂ ಆತನ ಬಲವಾದ ಕೈಯನ್ನೂ ಆತನು ಚಾಚಿದತೋಳನ್ನೂ
ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ.
ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;
ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
ಆದದರಿಂದ ದೇವರಾದ ಕರ್ತನು ಹೇಳುತ್ತಾನೆ--ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೇಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದ ಮೇಲೆ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.
ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.
ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.
ಅನಂತರ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿದ್ದ ದೂತನನ್ನು ನಾನು ಕಂಡೆನು. ಅವನು ತನ್ನ ಕೈಯನ್ನು ಪರಲೋಕದ ಕಡೆಗೆ ಎತ್ತಿ--