ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
Cross references
ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು.
ಕರ್ತನು ಮಾತನಾಡಿ ಮೋಶೆಗೆ--
ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು, ನಾನು ನಿಮ್ಮ ಮಧ್ಯದಲ್ಲಿ ಹೋಗು ವದಿಲ್ಲ. ನೀವು ಬಗ್ಗದ ಕುತ್ತಿಗೆಯುಳ್ಳ ಜನವಾಗಿದ್ದೀರಿ; ಮಾರ್ಗದಲ್ಲಿ ನಿಮ್ಮನ್ನು ನಾನು ಸಂಹರಿಸೇನು ಅಂದನು.
ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.
ಅವರು ಅವ ನಿಗೆ--ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ; ಅದರ ಫಲವು ಇದೇ.
ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
ಕರ್ತನು ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗುವ ಹಾಗೆಯೂ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಯನ್ನೆಲ್ಲಾ ಕೈಕೊಳ್ಳಬೇಕು.
ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
ನಮ್ಮನ್ನು ಈ ಸ್ಥಳಕ್ಕೆ ಕರಕೊಂಡು ಬಂದು ಹಾಲೂ ಜೇನೂ ಹರಿಯುವ ಈ ದೇಶವನ್ನು ನಮಗೆ ಕೊಟ್ಟಿ ದ್ದಾನೆ.
ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
ದೇವರು ಮಹಾಧ್ವನಿಯಿಂದ, ಕರ್ತನು ತುತೂ ರಿಯ ಶಬ್ದದಿಂದ, ಮೇಲೆ ಹೋಗಿದ್ದಾನೆ.
ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್ ದಡವಿಾರು ವಾಗ ಏನು ಮಾಡುವಿ?
ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
ಅವರಿಗೆ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲನ್ನು ಆದುಕೊಂಡು ಯಾಕೋಬನ ಮನೆಯ ವಂಶದವರಿಗೆ ನನ್ನ ಕೈಯೆತ್ತಿ ಮತ್ತು ಐಗುಪ್ತ ದೇಶದಲ್ಲಿ ಅವರಿಗೆ ನನ್ನನ್ನು ತಿಳಿಯಪಡಿಸಿದ ದಿನದಲ್ಲಿ ನಾನು ಅವರಿಗೆ ನನ್ನ ಕೈಯೆತ್ತಿ ನಿಮ್ಮ ದೇವರಾದ ಕರ್ತನು ನಾನೇ ಎಂದು ಅವರಿಗೆ ಹೇಳಿದಾಗ,
ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶಗಳಲ್ಲಿ ಹರಡಿಸುತ್ತೇನೆಂದೂ ಅರಣ್ಯದಲ್ಲಿ ಅವರ ಮೇಲೆ ಕೈ ಎತ್ತಿದೆನು;
ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.
ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
ಇದಲ್ಲದೆ ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳು ಕೆಡವಲ್ಪಡುವವು; ಆದರೆ ಎದೋಮು, ಮೋವಾಬು ಅಮ್ಮೋನನ ಮಕ್ಕಳಲ್ಲಿ ಮುಖ್ಯಸ್ಥರು ಆತನ ಕೈಯಿಂದ ತಪ್ಪಿಸಿಕೊಳ್ಳುವರು.
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.