ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
Cross references
ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು.
ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
ಅದಕ್ಕೆ ವಿಾಕಾಯೆಹುವುಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿ ಯೊಳಗೆ ನೀನು ಹೋಗುವ ದಿವಸದಲ್ಲಿ ನೋಡುವಿ ಅಂದನು.
ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.
ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು.
ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.