ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದ್ರೋಹಗಳು ಪ್ರಕಟವಾಗಿ ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಯಲ್ಲಿ ಹಿಡಿಯಲ್ಪಡುವಿರಿ.
Cross references
ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.
ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆತ್ತುಕೊಂಡು ಎಲ್ಲಿ ನಿನ್ನ ಸಂಗಡ ಮಲಗಲಿಲ್ಲವೋ ನೋಡು. ಅರಣ್ಯದಲ್ಲಿ ಅರಬಿಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ; ಹೀಗೆ ನಿನ್ನ ಸೂಳೆತನಗಳಿಂದಲೂ ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀ.
ನೀನು ಅವರ ಮಾರ್ಗವನ್ನು ತಿಳಿದು ಶೋಧಿಸುವ ಹಾಗೆ ನಿನ್ನನ್ನು ನನ್ನ ಜನರಲ್ಲಿ ಬುರುಜನ್ನಾಗಿಯೂ ಕೋಟೆಯನ್ನಾಗಿಯೂ ಇಟ್ಟಿದ್ದೇನೆ.
ನಿಮ್ಮ ಸಹೋದರರೆಲ್ಲರನ್ನೂ ಎಫ್ರಾಯಾಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.
ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
ಕರ್ತನು ಹೀಗೆ ಹೇಳುತ್ತಾನೆ, ಅನ್ಯರ ಆಚ ರಣೆಯನ್ನು ಕಲಿತುಕೊಳ್ಳಬೇಡಿರಿ, ಆಕಾಶದ ಗುರುತುಗಳಿಗೆ ದಿಗ್ಭ್ರಮೆಗೊಳ್ಳಬೇಡಿರಿ. ಅನ್ಯರು ಅವುಗಳಿಗೆ ದಿಗ್ಭ್ರಮೆಗೊಳ್ಳುತ್ತಾರೆ,
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ.
ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ.
ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,
ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ.
ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ;
ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ.
ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.