ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ಆತನ ದಿವಸಗಳಲ್ಲಿ ನೀತಿವಂತನು ವೃದ್ಧಿಯಾಗುವನು. ಸಮೃದ್ಧಿ ಯಾದ ಸಮಾಧಾನವು ಚಂದ್ರನು ಇರುವ ವರೆಗೂ ಇರುವದು.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ನಿನಗೋಸ್ಕರ ದಾರಿಗುರುತುಗಳನ್ನು ನಿಲ್ಲಿಸು; ಎತ್ತರವಾದ ಗುಡ್ಡಗಳನ್ನು ಇರಿಸು; ಹೆದ್ದಾರಿಯ ಕಡೆಗೆ ನೀನು ಹೋದದಾರಿಗೆ ನಿನ್ನ ಹೃದಯವನ್ನು ಇಟ್ಟುಕೋ; ಇಸ್ರಾಯೇಲಿನ ಕನ್ಯಾಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.
ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ಆತನಲ್ಲಿ ಜೀವವಿತ್ತು; ಆ ಜೀವವು ಮನುಷ್ಯ ರಿಗೆ ಬೆಳಕಾಗಿತ್ತು.
ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;