ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
Cross references
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ.
ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.
ನಿನ್ನ ಬಲಗೈ ಮನುಷ್ಯನ ಮೇಲೆ ಹೌದು, ನೀನು ನಿನಗೆ ಬಲಪಡಿಸಿಕೊಂಡ ಮನುಷ್ಯ ಪುತ್ರನ ಮೇಲೆ ನಿನ್ನ ಕೈ ಇರಲಿ.
ನಿನ್ನ ಬಿರುಗಾಳಿಯಿಂದ ಅವರನ್ನು ಹಿಂಸಿಸಿ ನಿನ್ನ ಸುಳಿ ಗಾಳಿಯಿಂದ ಅವರನ್ನು ತಲ್ಲಣ ಪಡಿಸು.
ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು.
ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ಇಲ್ಲ ದಿದ್ದರೆ ನಾನು ಆ ದೇಶದ ಮೇಲೆ ಕತ್ತಿಯನ್ನು ತರಿಸಿ --ಕತ್ತಿಯೇ, ಆ ದೇಶದಲ್ಲಿ ಹಾದುಹೋಗು ಎಂದು ಹೇಳಿ, ಅದು ಮನುಷ್ಯರನ್ನೂ ಮೃಗಗಳನ್ನೂ ಅದರೊಳ ಗಿಂದ ಕಡಿದುಬಿಟ್ಟಾಗ
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ಕರ್ತನು ಹೀಗೆ ಹೇಳುವನೆಂದು ಹೇಳು--ಕತ್ತಿಯು, ಆ ಒಂದು ಕತ್ತಿಯು ಹದಮಾಡ ಲ್ಪಟ್ಟಿದೆ; ಮೆರುಗು ಸಹ ಮಾಡಲ್ಪಟ್ಟಿದೆ;
ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.
ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.
ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ನಿನಗೆ ವಿರೋಧವಾಗಿ ದ್ದೇನೆ; ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.
ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.