ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
Cross references
ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
ಕೋಟೆಯಲ್ಲಿ ವಾಸವಾಗಿರುವವನೇ, ದೇಶದೊಳ ಗಿಂದ ನಿನ್ನ ಸರಕುಗಳನ್ನು ಕೂಡಿಸು.
ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
ಇದಲ್ಲದೆ ನೀನು ಆಹಾರವನ್ನು ಬಾರ್ಲಿಯ ರೊಟ್ಟಿಗಳಂತೆ ತಿನ್ನಬೇಕು; ಮತ್ತು ಅದನ್ನು ಮನುಷ್ಯನೊಳಗಿಂದ ಬರುವ ಮಲದಿಂದ ಅವರ ಕಣ್ಣುಗಳ ಮುಂದೆ ಅಡಿಗೆಮಾಡಬೇಕು;
ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು.
ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು; ಇದು ನನ್ನ ಜನರ ಮೇಲೆಯೂ ಇಸ್ರಾಯೇಲಿನ ಎಲ್ಲಾ ಅಧಿಪತಿಗಳ ಮೇಲೆಯೂ ಇರುವದು; ಕತ್ತಿಯ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವದು. ಆದದರಿಂದ ತೊಡೆಯನ್ನು ಬಡಿದುಕೋ.
ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.
ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು.
ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ--