ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
Cross references
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
ನೀತಿಯಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ರಕ್ತಕ್ಕೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತ ಸ್ಥಳದಲ್ಲಿ ವಾಸಿಸುವನು.
ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
ಮನುಷ್ಯಪುತ್ರನೇ, ಬಾಬೆಲಿನ ಅರಸನ ಕತ್ತಿಯು ಬರುವ ಹಾಗೆ ನೀನು ಎರಡು ಮಾರ್ಗಗ ಳನ್ನು ನೇಮಿಸಿಕೋ; ಅವೆರಡೂ ಒಂದೇ ದೇಶದಿಂದ ಹೊರಡಬೇಕು; ಇದರಲ್ಲಿ ಒಂದು ಸ್ಥಳವನ್ನು ಆರಿ ಸಿಕೋ, ಅದು ಪಟ್ಟಣದ ಮಾರ್ಗದ ಪ್ರಾರಂಭದಲ್ಲಿ ಆರಿಸಿಕೋ.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅವರನ್ನು ದಂಡನೆಯಿಂದ ತಪ್ಪಿಸುವದಿಲ್ಲ. ಅವರು ನೀತಿವಂತರನ್ನು ಬೆಳ್ಳಿಗೆ ಬಡವರನ್ನು ಕೆರಗಳ ಜೋಡಿಗೆ ಮಾರಿದರು.
ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ದುಷ್ಟರ ಮನೆಯಲ್ಲಿ ದುಷ್ಟತ್ವದ ಬೊಕ್ಕಸಗಳೂ ಅಸಹ್ಯವಾದಂಥ ಕಡಿಮೆಯಾದ ಅಳತೆಯೂ ಉಂಟೋ?
ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ.