ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
Cross references
ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.