ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
Cross references
ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ಪ್ರವಾದಿ ಯಾದ ಯೆರೆವಿಾಯನು ಸೆರೆಯಲ್ಲಿರುವ ಹಿರಿಯರ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬೆಲಿಗೆ ಒಯ್ದ ಜನರೆಲ್ಲರಿಗೆ
ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
ಆ ದಿವಸದಲ್ಲಿ ಆಗುವದೇನಂದರೆ--ನಾನು ಅವನ ನೊಗವನ್ನು ನಿನ್ನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು; ನಿನ್ನ ಬಂಧನಗಳನ್ನು ಹರಿದುಬಿಡುವೆನು; ಅನ್ಯರು ಇನ್ನು ಅವನಿಂದ ಸೇವೆ ಮಾಡಿಸಿಕೊಳ್ಳುವದಿಲ್ಲವೆಂದು ಸೈನ್ಯ ಗಳ ಕರ್ತನು ಅನ್ನುತ್ತಾನೆ.
ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ, ಹೀಗೆ ನಿನ್ನನ್ನು ಹತವಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ; ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.
ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.