ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
ಇಸ್ರಾಯೇಲಿನ ಶ್ರಮೆಯು ಬಹಳ ಕಠಿಣವಾಗಿದೆ ಎಂದು ಕರ್ತನು ಕಂಡನು. ಯಾಕಂದರೆ ಮುಚ್ಚಲ್ಪಟ್ಟವನಾದರೂ ಬಿಡಲ್ಪಟ್ಟವನಾದರೂ ಇಸ್ರಾ ಯೇಲಿಗೆ ಸಹಾಯಕನಾದರೂ ಯಾವನೂ ಇರಲಿಲ್ಲ.
ನಿನ್ನ ಹಾಗಿ ರುವ ಮನುಷ್ಯನಿಗೆ ನಿನ್ನ ದುಷ್ಟತ್ವವು ಕೇಡು ಮಾಡ ಬಹುದು. ಮನುಷ್ಯನ ಮಗನಿಗೆ ನಿನ್ನ ನೀತಿಯು ಲಾಭ ಮಾಡಬಹುದು.
ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.
ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
ಕರ್ತನ ದಿನದಲ್ಲಿ ಯುದ್ಧಕ್ಕೆ ನಿಲ್ಲ ಬೇಕೆಂದು ಇಸ್ರಾಯೇಲ್ ಮನೆತನದವರಿಗಾಗಿ ಬೇಲಿ ಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರ ಲಿಲ್ಲ.