ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
Cross references
ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
ನೀನು ಸುಳ್ಳು ಸುದ್ಧಿಯನ್ನು ಹಬ್ಬಿಸ ಬಾರದು. ಅನ್ಯಾಯದ ಸಾಕ್ಷಿಯಾಗಿರು ವದಕ್ಕೆ ದುಷ್ಟನೊಂದಿಗೆ ಸೇರಬೇಡ.
ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
ಅವರು ಇಸ್ರಾಯೇಲಿನಲ್ಲಿ ದುಷ್ಕರ್ಮವನ್ನೂ ಬುದ್ಧಿಹೀನವಾದ ಕೆಲಸವನ್ನೂ ಮಾಡಿದ್ದರಿಂದ ನಾನು ನನ್ನ ಉಪಪತ್ನಿ ಯನ್ನು ಹಿಡಿದು ಅವಳನ್ನು ಕಡಿದು ಇಸ್ರಾಯೇಲಿನ ಬಾಧ್ಯತೆಯಾದ ಸೀಮೆಯೆಲ್ಲಾದರಲ್ಲಿ ಕಳುಹಿಸಿದೆನು.
ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.
ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
ಚಾಡಿಕೋರನ ಮಾತುಗಳು ಗಾಯಗಳಂತೆ ಇದ್ದು ಹೊಟ್ಟೆಯೊಳಗೆ ಇಳಿದುಹೋಗುವವು.
ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.
ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು.
ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು.
ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.