ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
Cross references
ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
ಆರನೇ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ಆಗಿದ್ದೇನಂದರೆ--ನಾನೂ ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ ಅಲ್ಲಿ ದೇವರಾದ ಕರ್ತನ ಹಸ್ತವು ನನ್ನ ಮೇಲೆ ಬಿತ್ತು.
ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.
ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು.
ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು.
ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು.
ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ (ಮಂಡೂರ) ಕಿಟ್ಟದ ಹಾಗಾದರು ಅವರೆಲ್ಲರೂ ಬಲೆಯ ಮಧ್ಯದಲ್ಲಿರುವ ಹಿತ್ತಾಳೆ, ತವರ, ಕಬ್ಬಿಣದ, ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಿಟ್ಟಗಳ ಹಾಗೆಯೂ ಇದ್ದಾರೆ.
ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.