ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
Cross references
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.
ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
ನೀನು ಹೋಗಿ ನನಗೆ ಕೋಪ ವನ್ನೆಬ್ಬಿಸುವ ಅನ್ಯ ದೇವರುಗಳನ್ನೂ ಎರಕ ಹೊಯ್ಯ ಲ್ಪಟ್ಟ ವಿಗ್ರಹಗಳನ್ನೂ ನಿನಗೆ ಮಾಡಿಕೊಂಡು ನನ್ನನ್ನು ನಿನ್ನ ಬೆನ್ನಿನ ಹಿಂದಕ್ಕೆ ಹಾಕಿದಿ.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ.
ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.
ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.