ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
Cross references
ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.
ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.
ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.
ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ.
ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.