ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
Cross references
ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
ನಿನ್ನ ದೇವರಾದ ಕರ್ತನು ನಿನಗೆ ವಾಸಮಾಡು ವದಕ್ಕೆ ಕೊಡುವ ನಿನ್ನ ಪಟ್ಟಣಗಳೊಳಗೆ ಒಂದರಲ್ಲಿ
ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
ನಿಮ್ಮ ನಗರದಲ್ಲಿ ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳುಮಾಡಲ್ಪಡುವವು; ಎತ್ತರವಾದ ಸ್ಥಳಗಳೂ ನಾಶ ಮಾಡಲ್ಪಡುವವು; ಹೀಗೆ ನಿಮ್ಮ ಯಜ್ಞವೇದಿಗಳು ನಾಶವಾಗಿಯೂ ಹಾಳಾಗಿಯೂ ಹೋಗುವವು. ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲದಂತಾಗುವವು. ನೀವು ರೂಪಿಸಿದ ಪ್ರತಿಮೆಗಳು ಕಡಿದುಹಾಕಲ್ಪಟ್ಟು ಅಳಿಸ ಲ್ಪಡುವವು.
ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ.
ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.