ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
Cross references
ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
ಈಗ ನಿನ್ನ ಮೇಲೂ ಅಂತ್ಯವು ಬಂದಿದೆ ಮತ್ತು ನನ್ನ ಕೋಪವನ್ನು ನಿನ್ನ ಮೇಲೆ ಕಳುಹಿಸುತ್ತೇನೆ; ನಿನ್ನ ಮಾರ್ಗಗಳ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು.
ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶ ಗಳಲ್ಲಿ ಚದರಿಹೋದರು; ಅವರ ಮಾರ್ಗಗಳ ದುಷ್ಕ್ರಿ ಯೆಗಳ ಪ್ರಕಾರವಾಗಿ ಅವರಿಗೆ ನಾನು ನ್ಯಾಯ ತೀರಿಸಿದೆನು.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.