ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
Cross references
ಸಂಸೋನನು ತಿಮ್ನಾಗೆ ಹೋಗಿ ತಿಮ್ನಾ ದೊಳಗೆ ಪಿಲಿಷ್ಟಿಯರ ಕುಮಾರ್ತೆಯರಲ್ಲಿ ಒಬ್ಬ ಸ್ತ್ರೀಯನ್ನು ನೋಡಿ
ಸಮುವೇಲನ ವಾಕ್ಯವು ಸಮಸ್ತ ಇಸ್ರಾಯೇ ಲಿನಲ್ಲಿ ಮುಟ್ಟಿತು. ಆದರೆ ಇಸ್ರಾಯೇ ಲ್ಯರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸವಿಾಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.
ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು.
ಫಿಲಿಷ್ಟಿಯರು ಯುದ್ಧಮಾಡುವದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋ ವಿನಲ್ಲಿ ಕೂಡಿಸಿ ಅಜೇಕಕ್ಕೂ ಸೋಕೋವಿಗೂ ಮಧ್ಯ ದಲ್ಲಿ ಎಫೆಸ್ದವ್ಮೆಾಮಿನಲ್ಲಿ ದಂಡಿಳಿದರು.
ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು.
ಇವನ ಮಗನು ಜಾಬಾದನು; ಇವನ ಮಕ್ಕಳು --ಶೂತೆಲಹನು ಎಜೆರನೂ ಎಲ್ಲಾದನೂ. ಆ ದೇಶ ದಲ್ಲಿ ಹುಟ್ಟಿದ ಗತ್ನವರು ಇವರ ದನಗಳನ್ನು ಸುಲು ಕೊಳ್ಳಲು ಇಳಿದು ಬಂದಾಗ ಇವರನ್ನು ಕೊಂದು ಹಾಕಿದರು.
ಇದಲ್ಲದೆ ಫಿಲಿ ಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ ಯೆಹೂ ದದ ದಕ್ಷಿಣ ಪಾರ್ಶ್ವದಲ್ಲಿಯೂ ಹೊಕ್ಕು ಬೇತ್ಷೆಮೆ ಷನ್ನೂ ಅಯ್ಯಾಲೋನನ್ನೂ ಗೆದೇರೋತನ್ನೂ ಸೋಕೋವನ್ನೂ ಅದರ ಗ್ರಾಮಗಳನ್ನೂ ತಿಮ್ನಾ ವನ್ನೂ ಅದರ ಗ್ರಾಮಗಳನ್ನೂ ಗಿಮ್ಜೋವನ್ನೂ ಅದರ ಗ್ರಾಮಗಳನ್ನೂ ತಕ್ಕೊಂಡು ಅಲ್ಲಿ ವಾಸವಾಗಿದ್ದರು.
ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ;
ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
ಇದಲ್ಲದೆ ಕಿರ್ಯತ್ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.
ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.
ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.