ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
Cross references
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
ಅವರ ಸಂಗಡ ಜಗಳವಾಡಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದದಷ್ಟೂ ಸ್ಥಳ ಕೊಡುವದಿಲ್ಲ; ಸೇಯಾರ್ ಬೆಟ್ಟವನ್ನು ಏಸಾವನಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ.
ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.
ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?
ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ,
ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.
ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ.
ಓಬದ್ಯನ ದರ್ಶನವು. ಕರ್ತನಾದ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾನೆ--ಕರ್ತನಿಂದ ಸುದ್ಧಿಯನ್ನು ಕೇಳಿದ್ದೇವೆ; ಅನ್ಯಜನಾಂಗಗಳಲ್ಲಿ ರಾಯ ಭಾರಿಯು ಕಳುಹಿಸಲ್ಪಟ್ಟಿದ್ದಾನೆ; ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಏಳುವ!
ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.