ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
Cross references
ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.
ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
ಪಟ್ಟಣವು ಒಂದು ಕಡೆಯಲ್ಲಿ ಹಿಡಿಯಲ್ಪಟ್ಟಿದೆ ಎಂದೂ ದಾಟುವ ಸ್ಥಳಗಳು ವಶವಾದವೆಂದೂ ಬಿದಿರುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದೂ ಯುದ್ಧಸ್ಥರು ಗಾಬರಿ ಪಟ್ಟರೆಂದೂ
ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು.
ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.
ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು?
ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.
ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ; ಅವರು--ಅವಳು ಕೆಡಿಸಲ್ಪಡಲಿ, ಚೀಯೋನಿನ ಮೇಲೆ ನಮ್ಮ ಕಣ್ಣುಗಳು ದೃಷ್ಟಿಸಲಿ ಎಂದು ಹೇಳುತ್ತಾರೆ.
ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.