ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
Cross references
ಅರಸರಿಗೆ ಅರಸನಾದ ಅರ್ತಷಸ್ತನು ಪರಲೋಕದ ದೇವರ ನ್ಯಾಯಪ್ರಮಾಣ ವಿಷಯ ಶಾಸ್ತ್ರಿ ಯಾದ ಎಜ್ರನೆಂಬ ಯಾಜಕನಿಗೆ ಪೂರ್ಣ ಸಮಾಧಾನ ವಾಗಲಿ.
ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಆದರೆ ಅರಸನಾದ ಯೆಹೋಯಾಕೀಮನು ಐಗು ಪ್ತಕ್ಕೆ ಜನರನ್ನು, ಅಂದರೆ ಅಕ್ಬೋರನ ಮಗನಾದ ಎಲ್ನಾಥಾನನನ್ನೂ ಅವನ ಸಂಗಡ ಇನ್ನೂ ಕೆಲವರನ್ನೂ ಐಗುಪ್ತಕ್ಕೆ ಕಳುಹಿಸಿದನು.
ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.
ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು.
ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.
ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್ನಿಂದ ಪ್ರತಿಫಲವೇನೂ ದೊರೆಯಲಿಲ್ಲ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಐಗುಪ್ತದ ಜನಸಮೂಹವನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಕೊನೆಗಾಣಿಸುವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅರಸನ ಕತ್ತಿಯು ನಿನ್ನ ಮೇಲೆ ಬರುವದು;
ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
ಆತನ ಬಲಾಢ್ಯದ ಡಾಲು ಕೆಂಪಾಗಿದೆ; ಶೂರರು ರಕ್ತವರ್ಣದವರಾಗಿದ್ದಾರೆ; ಆತನು ಸಿದ್ಧಮಾಡುವ ದಿನ ದಲ್ಲಿ ರಥಗಳು ಹೊಳೆಯುವ ದೀವಟಿಗೆಗಳ ಹಾಗೆ ಇರುವವು; ಸೈಪ್ರಸ್ ಮರಗಳು ಭಯಂಕರವಾಗಿ ಅಲ್ಲಾ ಡಿಸಲ್ಪಡುವವು.
ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.