Home Bibles ಯೆಹೆಜ್ಕೇಲ 28:25 · ಕನ್ನಡ ಬೈಬಲ್
ಯೆಹೆಜ್ಕೇಲ 28:25 · ಕನ್ನಡ ಬೈಬಲ್

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.

Cross references

ಆದಿಕಾಂಡ 28:13

ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.

ಲೇವ್ಯಕಾಂಡ 26:44

ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.

ದ್ವಿತೀಯೋಪದೇಶಕಾಂಡ 30:3

ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.

ಕೀರ್ತನೆಗಳು 106:47

ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್‌ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.

ಯೆಶಾಯ 5:16

ಆದರೆ ಸೈನ್ಯಗಳ ಕರ್ತನು ನ್ಯಾಯತೀರ್ಪಿನಲ್ಲಿ ಉನ್ನತನಾಗಿ ರುವನು ಪರಿಶುದ್ಧನಾದ ದೇವರು ನೀತಿಯಲ್ಲಿ ಪರಿಶುದ್ಧ ನೆನಿಸಿಕೊಳ್ಳುವನು.

ಯೆಶಾಯ 11:12

ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.

ಯೆಶಾಯ 27:12

ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

ಯೆರೆಮಿಯ 12:14

ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 23:8

ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.

ಯೆರೆಮಿಯ 27:11

ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.

ಯೆರೆಮಿಯ 30:18

ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.

ಯೆರೆಮಿಯ 31:8

ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.

ಯೆಹೆಜ್ಕೇಲ 11:17

ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್‌ ದೇಶವನ್ನು ನಿಮಗೆ ಕೊಡುತ್ತೇನೆ.

ಯೆಹೆಜ್ಕೇಲ 20:41

ನಾನು ನಿಮ್ಮನ್ನು ಜನರಿಂದ ಹೊರತಂದು ನೀವು ಚದರಿರುವ ದೇಶಗಳೊಳಗಿಂದ ನಿಮ್ಮನ್ನು ಕೂಡಿಸುವಾಗ ನಿಮ್ಮ ಸುವಾಸನೆಯ ಸಂಗಡ ನಾನು ನಿಮ್ಮನ್ನು ಅಂಗೀಕರಿಸುವೆನು, ನಾನು ಅನ್ಯ ಜನಾಂಗಗಳ ಮುಂದೆ ನಿಮ್ಮಲ್ಲಿ ಪರಿಶುದ್ಧವೆನಿಸಿಕೊಳ್ಳು ವೆನು.

ಯೆಹೆಜ್ಕೇಲ 28:22

ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.

ಯೆಹೆಜ್ಕೇಲ 34:13

ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.

ಯೆಹೆಜ್ಕೇಲ 34:27

ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;

ಯೆಹೆಜ್ಕೇಲ 36:23

ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೆಹೆಜ್ಕೇಲ 36:28

ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.

ಯೆಹೆಜ್ಕೇಲ 37:21

ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.

ಯೆಹೆಜ್ಕೇಲ 37:25

ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.

ಯೆಹೆಜ್ಕೇಲ 38:23

ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.

ಯೆಹೆಜ್ಕೇಲ 39:27

ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;

ಹೊಶೇಯ 1:11

ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.

ಯೋವೇಲ 3:7

ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.

ಆಮೋಸ 9:14

ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.

ಒಬದ್ಯ 1:17

ಆದರೆ ಚೀಯೋನ್‌ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.

ಮೀಕ 7:11

ನಿನ್ನ ಗೋಡೆಗಳು ತಿರುಗಿ ಕಟ್ಟಲ್ಪಡುವ ಆ ದಿನದಲ್ಲಿ ನಿರ್ಣಯವು ದೂರವಾಗಿ ಹೋಗುವದು.

ಸೆಫನ್ಯ 3:19

ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.

Interlinear

Choose Theme