ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
Cross references
ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ
ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ.
ನೀನು ಎದೋಮ್ಯ ರನ್ನು ಹೊಡೆದೇ ಹೊಡೆದದ್ದರಿಂದ ನಿನ್ನ ಹೃದಯವು ನಿನ್ನನ್ನು ಹೆಚ್ಚಿಸುವಂತೆ ಮಾಡಿತು. ಹೆಚ್ಚಳಪಡು; ಮನೆಯಲ್ಲಿ ಕಾದಿರು; ನಿನ್ನ ಕೇಡಿಗಾಗಿ ನೀನು ಯಾಕೆ ಜಗಳವಾಡಬೇಕು? ನೀನೂ ನಿನ್ನ ಸಂಗಡ ಯೆಹೂ ದವೂ ಬಿದ್ದು ಹೋಗುವಿರಲ್ಲಾ ಅಂದನು. ಆದರೆ ಅಮಚ್ಯನು ಕೇಳದೆ ಹೋದನು.
ಇಗೋನಾನು ಎದೋಮ್ಯರನ್ನು ಹೊಡೆದಿದ್ದೇನೆಂದು ಹೇಳಿ ಕೊಳ್ಳುತ್ತೀ; ಆದದರಿಂದ ನಿನ್ನ ಹೃದಯವು ನಿನ್ನನ್ನು ಅಹಂಕಾರದಿಂದ ಕೊಚ್ಕಿಕೊಳ್ಳುವಂತೆ ಮಾಡುತ್ತದೆ. ಈಗ ಮನೆಯಲ್ಲಿ ಕೂತಿರು. ನೀನೂ ನಿನ್ನ ಸಂಗಡ ಯೆಹೂದವೂ ಬಿದ್ದು ಹೋಗುವ ಹಾಗೆ ನಿನ್ನ ಕೇಡಿಗೆ ನೀನು ಕೈ ಹಾಕುವದೇನು ಅಂದನು.
ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು.
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು.
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
ಆ ಸಮೂಹವನ್ನು ಅವನು ತೆಗೆದು ಹಾಕಿದ ಮೇಲೆ ಅವನ ಹೃದಯವು ಹೆಚ್ಚಳಪಡುವದು; ಹೌದು, ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ ಪ್ರಬಲವಾಗ ಲಾರನು.
ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ.