ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
Cross references
ನಿನ್ನ ಹೃದಯ ದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ; ಹೇಗಾ ದರೂ ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
ಆಗ ನಾತಾನನು ದಾವೀದನಿಗೆ--ನೀನೇ ಆ ಮನು ಷ್ಯನು. ಇಸ್ರಾಯೇಲಿನ ದೇವರಾದ ಕರ್ತನು--ನಾನು ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ಯೆಹೋವಾಷನು ಯಾಜಕನಾದ ಯೆಹೋಯಾ ದನ ಸಮಸ್ತ ದಿವಸಗಳಲ್ಲಿ ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.
ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ನಿನ್ನ ನ್ಯಾಯಪ್ರಮಾಣ ವನ್ನು ಪ್ರೀತಿಮಾಡುವವರಿಗೆ ಸಂಪೂರ್ಣ ಸಮಾ ಧಾನ ಉಂಟು; ಅವರಿಗೆ ಆತಂಕವೇನೂ ಇರುವದಿಲ್ಲ.
ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು.
ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು; ಅವರ ಬಂಗಾರವು ತೆಗೆದುಹಾಕಲ್ಪಡುವದು, ಅವರ ಬೆಳ್ಳಿ ಬಂಗಾರಗಳು ಕರ್ತನ ಕೋಪದ ದಿವಸದಲ್ಲಿ ಅವರನ್ನು ತಪ್ಪಿಸಲಾರವು ಮತ್ತು ಅವರ ಪ್ರಾಣಗಳನ್ನು ತೃಪ್ತಿಪಡಿ ಸುವದಿಲ್ಲ. ಅವರ ಕರುಳುಗಳನ್ನು ತುಂಬಿಸುವದಿಲ್ಲ. ಯಾಕಂದರೆ ಅದು ಅವರ ಅಕ್ರಮಗಳ ಎಡತಡೆಯ ಭಾಗವಾಗಿದೆ.
ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
ನೀತಿವಂತನು ತನ್ನ ನೀತಿಯನ್ನು ಬಿಟ್ಟು ತಿರುಗಿಕೊಂಡು ಅನ್ಯಾಯಮಾಡಿ ಇವುಗಳಲ್ಲಿ ಸತ್ತರೆ, ಅವನು ಮಾಡಿದ ಅನ್ಯಾಯದಿಂದಲೇ ಸಾಯುವನು.
ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
ಇದಲ್ಲದೆ ನಿನ್ನ ಸಹೋದರನು ನಿನಗೆ ವಿರೋಧ ವಾಗಿ ತಪ್ಪು ಮಾಡಿದರೆ ನೀನೂ ಅವನೂ ಮಾತ್ರ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು; ಅವನು ನಿನ್ನ ಮಾತನ್ನು ಕೇಳಿದರೆ ನೀನು ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
ಆದರೆ ಒಳ್ಳೇ ಭೂಮಿಯವರು ಯಾರಂದರೆ ಯಥಾರ್ಥವಾದ ಒಳ್ಳೇ ಹೃದಯದಿಂದ ವಾಕ್ಯವನ್ನು ಕೇಳಿ ಅದನು ಕೈಕೊಂಡು ತಾಳ್ಮೆಯಿಂದ ಫಲಿಸುವವರೇ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.