ಆಗ ಅಲ್ಲಿ ಕರ್ತನ ಹಸ್ತವು ನನ್ನ ಮೇಲಿತ್ತು; ನನಗೆ ಆತನು ಹೇಳಿದ್ದೇನಂದರೆ--ಎದ್ದೇಳು, ಬಯಲು ಸೀಮೆಗೆ ಹೋಗು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು ಅಂದನು.
Cross references
ಕರ್ತನ ವಾಕ್ಯವು ಕಸ್ದೀಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ ಬೂಜಿಯ ಮಗನೂ ಯಾಜಕನೂ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು, ಕರ್ತನ ಕೈ ಅವನ ಮೇಲಿತ್ತು.
ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.
ಇಗೋ, ಇಸ್ರಾ ಯೇಲಿನ ದೇವರ ಮಹಿಮೆಯು ನಾನು ಆ ಬಯಲು ಸೀಮೆಯಲ್ಲಿ ನೋಡಿದ ಆಕಾರದ ಪ್ರಕಾ ರವೇ ಅಲ್ಲಿ ಇತ್ತು.
ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.