ಇದಲ್ಲದೆ ನಾಲಿ ಗೆಯು ನಿನ್ನ ಅಂಗಳಕ್ಕೆ ಹತ್ತುವ ಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವ ವನಾಗಲಾರೆ; ಯಾಕಂದರೆ ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
Cross references
ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
ಆದದರಿಂದ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಅವರ ಸಂಗಡ ಮಾತನಾಡು; ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಂದ ನಿರಾಶೆಪಡಬೇಡ.
ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿಬಿದ್ದಂಥ ಮತ್ತು ಬೀಳುವಂಥ ಜನಾಂಗದವರಾದ ಇಸ್ರಾಯೇಲ್ಯರ ಮಕ್ಕಳ ಬಳಿಗೆ ನಾನು ನಿನ್ನನ್ನು ಕಳುಹಿಸು ತ್ತೇನೆ; ಅವರೂ ಅವರ ಪಿತೃಗಳೂ ಇಂದಿನ ವರೆಗೂ ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.
ಅವರು ಕೇಳಲಿ ಅಥವಾ ಕೇಳದಿರಲಿ (ಅವರು ತಿರುಗಿಬೀಳುವ ಮನೆಯವರು); ಆದರೆ ತಮ್ಮೊಳಗೆ ಒಬ್ಬ ಪ್ರವಾದಿ ಇರುವನೆಂದು ತಿಳಿದು ಕೊಂಡರೆ ಸಾಕು.
ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
ಎಫ್ರಾಯಾಮನು ವಿಗ್ರಹಗಳಿಗೆ ಸೇರಿಕೊಂಡಿ ದ್ದಾನೆ, ಅವನನ್ನು ಬಿಟ್ಟುಬಿಡು.
ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ.
ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
ಇಗೋ, ತಕ್ಕ ಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದದರಿಂದ ಈ ಸಂಗತಿಗಳು ಈಡೇರುವ ದಿನದ ವರೆಗೆ ನೀನು ಮೂಕನಾಗಿದ್ದು ಮಾತನಾಡಲಾರದೆ ಇರುವಿ ಅಂದನು.