ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.
Cross references
ಆಗ ಇಸ್ರಾಯೇ ಲೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ನಿನ್ನ ಮಧ್ಯದಲ್ಲಿ ಇಂಥಾ ಕೆಟ್ಟಕಾರ್ಯವನ್ನು ಮಾಡುವದಿಲ್ಲ.
ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
ಆದರೆ ನನ್ನ ಪ್ರಾಣವನ್ನು ನಾಶಮಾಡುವದಕ್ಕೆ ಹುಡುಕುವವರು ಭೂಮಿಯ ಕೆಳಭಾಗಗಳಿಗೆ ಹೋಗು ವರು.
ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.ಓ ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
ಮನುಷ್ಯಪುತ್ರನೇ, ಐಗುಪ್ತದ ಜನಸಮೂಹದ ವಿಷಯವಾಗಿ ಗೋಳಾಡು. ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಕುಮಾರ್ತೆ ಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಯೊ ಳಗೆ ಇಳಿಯುವವರ ಜೊತೆ ತಳ್ಳಿಬಿಡು.
ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.