ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
Cross references
ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು.
ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು.
ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು.
ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.
ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ.
ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.