ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
Cross references
ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.
ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
ಓ ಕರ್ತನೇ, ನನ್ನ ತುಟಿಗಳನ್ನು ತೆರೆ; ಆಗ ನನ್ನ ಬಾಯಿ ನಿನ್ನ ಸ್ತೋತ್ರವನ್ನು ಪ್ರಕಟಮಾಡುವದು.
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ, ವಿಚಾರಿಸಬೇಕಾದರೆ ವಿಚಾರಿಸಿರಿ; ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.
ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ.
ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
ನಾನು ಅವನನ್ನು ನೋಡದ ಹಾಗೆ ಒಬ್ಬನು ಮರೆಯಾದ ಸ್ಥಳಗಳಲ್ಲಿ ತನ್ನನ್ನು ಅಡಗಿಸಿಕೊ ಳ್ಳಬಹುದೋ ಎಂದು ಕರ್ತನು ಅನ್ನುತ್ತಾನೆ; ನಾನು ಆಕಾಶದಲ್ಲಿಯೂ ಭೂಮಿಯಲ್ಲಿಯೂ ವ್ಯಾಪಿಸಿರುವವ ನಲ್ಲವೋ? ಎಂದು ಕರ್ತನು ಅನ್ನುತ್ತಾನೆ.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ಆತನು ಇಷ್ಟಪೂರ್ವಕವಾಗಿ ಮನುಷ್ಯರ ಮಕ್ಕಳನ್ನು ಬಾಧಿಸುವದು ಇಲ್ಲ ದುಃಖಿಸು ವದೂ ಇಲ್ಲ.
ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
ಇಸ್ರಾಯೇಲಿನ ಮನೆತನದವರಿಗೆ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮಾನ ಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾ ಗಿಯೇ ತಿರುಗಿ ಕೊಳ್ಳಿರಿ; ನಿಮ್ಮ ಅಸಹ್ಯವಾದವುಗಳ ನ್ನೆಲ್ಲಾ ಬಿಟ್ಟು ನಿಮ್ಮ ಮುಖಗಳನ್ನು ತಿರುಗಿಸಿರಿ.
ಈ ಮೂವರು ಮನುಷ್ಯರು ಅದರಲ್ಲಿ ಇದ್ದರೂ ನನ್ನ ಜೀವದಾಣೆ, ಅವರು ಕುಮಾರರ ನ್ನಾಗಲೀ ಕುಮಾರ್ತೆಯರನ್ನಾಗಲೀ ತಪ್ಪಿಸದೆ ತಾವು ಮಾತ್ರ ತಪ್ಪಿಸಿಕೊಳ್ಳುವರು; ಆದರೆ ದೇಶವು ಹಾಳಾಗುವದು ಎಂದು ದೇವರಾದ ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು, ತಾನಾದರೂ ತನ್ನ ಕುಮಾರ್ತೆಯ ರಾದರೂ ನೀನು ನಿನ್ನ ಕುಮಾರ್ತೆಯರು ಮಾಡಿದ ಹಾಗೆ ಮಾಡಲಿಲ್ಲ.
ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.
ಆದರೆ ಅವರು ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ ಕೊಂಡು ಮಾನಸಾಂತರಪಟ್ಟದ್ದಕ್ಕಾಗಿ ಯೋಗ್ಯವಾದ ಕ್ರಿಯೆಗಳನ್ನು ಮಾಡಬೇಕೆಂದು ಮೊದಲನೆಯದಾಗಿ ದಮಸ್ಕದವರಿಗೂ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಯ ತೀರಗಳಲ್ಲಿಯೂ ಅನ್ಯಜನಾಂಗದವರಿಗೂ ಪ್ರಕಟಿಸಿದೆನು.
ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ.
ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ