ಮನುಷ್ಯ ಪುತ್ರನೇ. ನೀನು ನಿನ್ನ ಜನರ ಮಕ್ಕಳಿಗೆ ಹೇಳು--ನೀತಿವಂತನ ನೀತಿಯು ಅವನ ಅಪರಾಧದ ದಿನದಲ್ಲಿ ಅವನನ್ನು ತಪ್ಪಿಸುವದಿಲ್ಲ; ಹಾಗೆಯೇ ದುಷ್ಟನ ದುಷ್ಟತ್ವವು ಅವನು ತನ್ನ ದುಷ್ಟತ್ವವನ್ನು ಬಿಟ್ಟು ತಿರುಗುವ ದಿನದಲ್ಲಿ ಅದರಿಂದ ಬೀಳುವದಿಲ್ಲ; ನೀತಿವಂತನು ಪಾಪಮಾಡುವ ದಿನದಲ್ಲಿ ನೀತಿಯಿಂದ ಬದುಕ ಲಾರನು.
Cross references
ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು.
ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.
ಆಗ ನೀನು ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಕೂಜೆಯನ್ನು ಒಡೆದು, ಅವರಿಗೆ ಹೇಳಬೇಕಾದದ್ದೇ ನಂದರೆ,
ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
ಆದರೆ ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ನನ್ನ ನಿಯಮಗಳನ್ನೆಲ್ಲಾ ಕೈಕೊಂಡು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ ಅವನು ಸಾಯದೆ ನಿಶ್ಚಯವಾಗಿ ಬದುಕುವನು.
ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,
ಯಾವಾಗ ನೀತಿ ವಂತನು ತನ್ನ ನೀತಿಯಿಂದ ತಿರುಗಿಕೊಳ್ಳುವನೋ ಮತ್ತು ಅಕ್ರಮವನ್ನು ಮಾಡುವನೋ ಅವನು ಖಂಡಿತ ವಾಗಿಯೂ ಅದರಲ್ಲಿಯೇ ಸಾಯುವನು.
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ನನ್ನ ಚಿಕ್ಕಮಕ್ಕಳೇ, ನೀವು ಪಾಪಮಾಡ ದಂತೆ ಇವುಗಳನ್ನು ನಾನು ನಿಮಗೆ ಬರೆಯು ತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನು ನಮಗೆ ಪಕ್ಷವಾದಿಯಾಗಿದ್ದಾನೆ.