ಆದರೂ ನೀವು ಕರ್ತನ ಮಾರ್ಗ ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾಯೇಲಿನ ಮನೆತನ ದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೆ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯ ತೀರಿಸುವೆನು.
Cross references
ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಓ ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ.
ಆದರೆ ಇಸ್ರಾಯೇಲಿನ ಮನೆತನದವರು ಕರ್ತನ ಮಾರ್ಗ ಸಮವಲ್ಲ ಎನ್ನುತ್ತಾರೆ. ಇಸ್ರಾಯೇಲಿನ ಮನೆತನದವರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವುಗಳೇ.
ಆದರೂ ನಿನ್ನ ಜನರ ಮಕ್ಕಳು--ಕರ್ತನ ಮಾರ್ಗವು ಸಮವಿಲ್ಲ ಅನ್ನುತ್ತಾರೆ. ಅವರಿಗಾದರೋ ಅವರ ಮಾರ್ಗವೇ ಸಮವಾಗಿಲ್ಲ.
ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.