ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ?
Cross references
ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
ದೇಶವೂ ಹೊಲೆಯಾಗಿದೆ. ಆದದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು, ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವದು.
ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.
ಆದದರಿಂದ ನೀವು ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ಹೀಗಿದ್ದರೆ ನೀವು ವಾಸಿಸುವದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.
ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬದು ಗುಪ್ತವಾಗಿ ದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ ಅವಳು ಹಿಡಿಯಲ್ಪಡದಿದ್ದರೆ,
ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ
ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
ಈಹೊತ್ತು ನಮ್ಮ ದೇವರಾದ ಕರ್ತನನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆಮಾಡುವದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ವಿಷವನ್ನೂ ಮಾಚಿಪತ್ರೆಯನ್ನೂ ಬೆಳೆ ಸುವ ಬೇರು ನಿಮ್ಮಲ್ಲಿ ಇರಬಾರದು.
ಈಗ ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಒಳ್ಳೇ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ ಹಾಗೆಯೇ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ತನ್ನ ಆಜ್ಞೆ ಗಳನ್ನು ನೀವು ವಿಾರಿ, ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಕರ್ತನು ನಿಮಗೆ ಕೊಟ್ಟ ಈ ಒಳ್ಳೇ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಕರ್ತನು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವನು.ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
ಸೊಲೊಮೋನನು ಚೀದೋನ್ಯರ ದೇವತೆಯಾದ ಅಷ್ಟೋರೆತನ್ನೂ ಅಮ್ಮೋ ನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾ ಲಿಸಿದನು.
ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
ಅಂತಹ ಕೆಲಸಗಳನ್ನು ಮಾಡಿದರೂ ಪರ್ವತಗಳ ಮೇಲೆ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆತನ ದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ.
ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ.
ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.